ಬೆಳಗಾವಿಯಲ್ಲಿ ನಡೆದ ಜೆ.ಡಿ. ಎಸ್ ಸಮಾವೇಶದಲ್ಲಿ ದೇವೇ ಗೌಡ್ರು ಕಾಂಗ್ರೆಸ್ , ಬಿಜೆಪಿ ಯನ್ನು ಹೇಗೆ ಮಟ್ಟ ಹಾಕಲಿ ಎಂದು ಯೋಚನಾ ಮಗ್ನರಾಗಿ ಕುಳಿತ ಪರಿ ಇದು. ಅಥವಾ ಜೋರು ನಿದ್ದೆ ತೂಕಡಿಸಿ ಹಿಂಗ್ ಕುಂತರೋ ? ಯಾರಿಗ್ ಗೊತ್ತು?
ಜೀವದ ಬೆಲೆ ಏನು ಎಂಬುದನ್ನು ಪ್ರತಿಕ್ಷಣವೂ ಕಣ್ಣಾರೆ ಕಾಣುತ್ತಿದ್ದರೂ, ಜೀವದ ಹಂಗನ್ನು ಬಿಟ್ಟವರು ನಾವು. ಸಾವಿನ ಘೋರ ದೃಶ್ಯಗಳು, ಬರ್ಬರ ಹತ್ಯೆಯ ಕ್ಷಣಗಳು ಮಾನವ ಸಹಜವಾಗಿಯೇ ವಿವಿಧ ಭಾವನೆಗಳ ತಲ್ಲಣವನ್ನು ನಮ್ಮೆದೆಯಲ್ಲಿ ಎಬ್ಬಿಸಿದರೂ ಅವುಗಳ ಕಡೆಗೊಂದು ನಿರ್ಲಿಪ್ತ ದೃಷ್ಟಿಯನ್ನು ಬೀರಿ 'ವೃತ್ತಿಃ ಪರಮೋಧರ್ಮಃ' ಎಂಬ ತತ್ತ್ವಕ್ಕೆ ಬದ್ಧರಾಗಿ ಕೆಲಸ ಮಾಡುವವರು. ಇಷ್ಟು ವಿವರಣೆ ಕೊಡುವಾಗಲೇ ನಾವು ಪತ್ರಕರ್ತರು ಎಂಬುದು ಗೊತ್ತಾಗಿರಬಹುದು. ಜೀವನವೇ ಹಾಗೆ. ಅದು ಎಳೆದುಕೊಂಡು ಹೋದತ್ತ ಸಾಗುವುದಷ್ಟೇ ಜೀವಿಗಳಿಂದ ಸಾಧ್ಯ. ಆದರೆ ಅದೆಷ್ಟೋ ಬಾರಿ ನಾವು ಇದಕ್ಕೆ ವ್ಯತಿರಿಕ್ತವಾಗಿ ನಡೆದುಕೊಳ್ಳಬೇಕಾಗುತ್ತದೆ. ತಾನು ಹೋಗೆನೆಂಬ ಹಠಮಾರಿ ಭಾವವನ್ನು ಹೊಮ್ಮಿಸುವ ಜೀವನವನ್ನು ನಮಗೆ ಬೇಕಾದ ದಿಕ್ಕಿನತ್ತ ಸೆಳೆದುಕೊಳ್ಳಬೇಕಾಗುತ್ತದೆ. ಸಾಮಾನ್ಯ ಸಮಾರಂಭಗಳಲ್ಲಿ ಭಾಗವಹಿಸಿ ವರದಿ ಮಾಡುವಾಗ ಇರುವ ನೆಮ್ಮದಿ, ಅಪರಾಧ ಜಗತ್ತಿನ ಬಗ್ಗೆ, ಯುದ್ಧದ ಕ್ಷಣಗಳ ಬಗ್ಗೆ ವರದಿ ಮಾಡುವಾಗ ಅದೆಷ್ಟೋ ದೂರಕ್ಕೆ ಓಡಿ ಹೋಗಿರುತ್ತದೆ. ಟಿವಿ ಮಾಧ್ಯಮಗಳ ಪ್ರಭಾವದಿಂದಾಗಿ 'ನಾ ಮೊದಲು ವರದಿ ಮಾಡಬೇಕು, ಬ್ರೇಕಿಂಗ್ ನ್ಯೂಸ್ ನಾನೇ ಕೊಡಬೇಕು' ಎಂಬ ಧಾವಂತ ಮುದ್ರಣ ಮಾಧ್ಯಮಗಳಲ್ಲಿ ಕೊಂಚ ಕಡಿಮೆಯಾಗಿದೆ ಎಂಬುದನ್ನು ಒಪ್ಪಿಕೊಳ್ಳಬೇಕು. ಹಾಗಂತ ಅದೆಷ್ಟೋ ಬಾರಿ ಟಿವಿ ಮಾಧ್ಯಮಗಳಿಗಿಂತ ವೇಗವಾಗಿ, ಅವುಗಳಿಗೆ ಸಿಗದ ಸುದ್ದಿಯನ್ನು ಮುಖಪುಟದಲ್ಲೇ ಪ್ರಕಟಿಸಿದ ದಾಖಲ...
ಕಾಮನ್ವೆಲ್ತ್ ಮತ್ತು ಏಷ್ಯನ್ ಕ್ರೀಡಾಕೂಟದಲ್ಲಿ ಭಾರತೀಯ ಅಥ್ಲೀಟ್ ಗಳು ಹಲವಾರು ಪದಕಗಳನ್ನು ಗೆದ್ದಾಗ ದೇಶದ ಕ್ರೀಡಾ ವಲಯದಲ್ಲಿಯೇ ಸಂಭ್ರಮ. ಭಾರತೀಯ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಹೊಸ ಭರವಸೆಗಳು ಹುಟ್ಟಿಕೊಂಡವು ಎಂಬ ಅದಮ್ಯ ವಿಶ್ವಾಸ. ಮುಂಬರುವ ಒಲಿಂಪಿಕ್ ಕ್ರೀಡಾಕೂಟದಲ್ಲಿ ಭಾರತ ಅಮೋಘ ಸಾಧನೆ ಮಾಡುತ್ತದೆ ಎಂಬ ಕೋಟಿ ಭರವಸೆ ಎಲ್ಲರಲ್ಲೂ ಮನೆ ಮಾಡಿತ್ತು. ಆದರೆ ಈಗ ಬಂದಿರುವ ಫಲಿತಾಂಶ ಮಾತ್ರ ಇವೆಲ್ಲವನ್ನೂ ಸುಟ್ಟು ಹಾಕಿದೆ. ಅಶ್ವಿನಿ ಅಕ್ಕುಂಜಿ, ಮನ್ ದೀಪ್ ಕೌರ್, ಸಿನಿ ಜೋಸ್, ಜುವಾನಾ ಮರ್ಮು, ಟಿಯಾನಾ ಮೇರಿ ಥಾಮಸ್, ಸೋನಿಯಾ, ಹರಿಕೃಷ್ಛಮುರಳೀಧರನ್, ಪ್ರಿಯಾಂಕಾ ಪನ್ವಾರ್ ಮೊದಲಾದ ಅಥ್ಲೀಟ್ ಗಳುನಿಷೇಧಿತ ಅನಬಾಲಿಕ್ ಸ್ಟಿರಾಯಿಡ್ ಮಿಥಾಂಡಿನನ್ ಸೇವಿಸಿದ್ದು ಖಾತ್ರಿಯಾದ ಕಾರಣ ನಿಷೇಧಕ್ಕೊಳಗಾದರು. ಮೊನ್ನೆ ಮೊನ್ನೆಯಷ್ಟೇ 19 ಕಬಡ್ಡಿ ಆಟಗಾರರು ಬಿ ಸ್ಯಾಂಪಲ್ ಪರೀಕ್ಷೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ವಿಶ್ವ ಕಬಡ್ಡಿಯಲ್ಲಿ ತನ್ನ ಪ್ರಾಬಲ್ಯ ಮೆರೆದಿದ್ದ ಭಾರತೀಯ ಕಬಡ್ಡಿ ತಂಡಕ್ಕೆ ಈಗ ಅಲ್ಲಿಯೂ ಕತ್ತಲೆ! ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚುವ ಆಕಾಂಕ್ಷೆ ಇಟ್ಟುಕೊಂಡಿರುವಂಥ ಹಲವಾರು ಭಾರತೀ ಕ್ರೀಡಾಳುಗಳು ಉದ್ದೀಪನ ಮದ್ದು ಸೇವನೆಯ ಸುಳಿಯಲ್ಲಿ ಸಿಲುಕುತ್ತಿದ್ದಾರೆ. ರಾಷ್ಟ್ರ ಮಟ್ಟದವರೆಗೂ ಯಾವುದೇ ಸಮಸ್ಯೆ ಎದುರಿಸದೇ ಇದ್ದವರಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಮಸ್ಯೆಗಳ ಸರಣಿಯೇ ಎದುರಾಗುತ್ತದೆ. ತಾನು ಉದ್ದೀಪನ ಮದ್ದು ಸೇವಿ...
ಅವರ ಇಂತಹ ಸಾವಿರಾರು ಪೋಸ್ಗಳು ಚಿರಪರಿಚಿತ
ReplyDelete